ಸುದ್ದಿ

ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಚಂದ್ರ ಆರ್ಯ

ಕನ್ನಡಿಗರೊಬ್ಬರು ದೂರದ ಕೆನಡಾ ಸಂಸದರಾಗಿ ಆಯ್ಕೆಯಾಗಿರೋದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಅಂತಹದ್ರಲ್ಲಿ ಅದೇ ಕೆನಡಾ ದೇಶದ ಸಂಸತ್ತಿನಲ್ಲಿ ನಮ್ಮ ಮಾತೃಭಾಷೆ ಕನ್ನಡ ಭಾಷೆಯಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಕನ್ನಡ ನಾಡು, ಕನ್ನಡ ಭಾಷೆ, ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಚಂದ್ರ ಆರ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದವರು. ಇವರು ಕೆನಡಾ ದೇಶದ ಸಂಸದರಾಗಿ ಆಯ್ಕೆಯಾಗಿ ಅತ್ಯುತ್ತಮ ಕೆಲಸ ನಿವರ್ಹಿಸುತ್ತಿದ್ದಾರೆ. ಚಂದ್ರ,ಆರ್ಯ ಅವರು ಕೆನಡಾದಲ್ಲಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೆನಡಾ ದೇಶದ ಸಂಸತ್ತಿನಲ್ಲಿ ಮಾತನಾಡುವಾಗ ತಮ್ಮ ಮಾತೃಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಎಲ್ಲರ ಗಮನ ಸೆಳೆದಿದ್ದಾ 

ಈ ಬಗ್ಗೆ ಸ್ವತಃ ಚಂದ್ರ ಆರ್ಯ ಅವರು ಟ್ವೀಟ್ ಮಾಡಿದ್ದು, ನಾನು ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆಯಲ್ಲಿ ಮಾತನಾಡಿದ್ದೇನೆ. ಪುರಾತನ ಇತಿಹಾಸವುಳ್ಳ ಸುಂದರವಾದ ನಮ್ಮ ಕನ್ನಡ ಭಾಷೆಯನ್ನ, 5 ಕೋಟಿ ಜನ ಮಾತನಾಡುತ್ತಾರೆ. ಪ್ರಪಂಚದಲ್ಲಿ ಇದೇ ಮೊದಲ ಬಾರಿಗೆ ವಿದೇಶದ ಸಂಸತ್ತಿನಲ್ಲಿ ಕನ್ನಡ ಭಾಷೆಯ ಮೂಲಕ ಮಾತನಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!