Uncategorized ಕೆಎಂಎಫ್ ಸುದ್ದಿ

 ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಶ್ರೀ.ಪುನೀತ್ ರಾಜ್‍ಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಕರ್ನಾಟಕ ಹಾಲು ಮಹಾಮಂಡಳಯು ರಾಜ್ಯದ ಎಲ್ಲಾ ವರ್ಗದ ಗ್ರಾಹಕರಿಗೆ ಕೈಗೆಟುಕುವ ದರದಲಿ ್ಲರುಚಿ ಶುಚಿಯಾದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು “ನಂದಿನಿ” ಬ್ಯ್ರಾಂಡ್ ಅಡಿಯಲ್ಲಿ ಕಳೆದ 40 ವರ್ಷಗಳಿಂದ ಒದಗಿಸುತ್ತಾ ಬರುತ್ತಿದ್ದು, ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಗ್ರ್ರಾಹಕರ ಆಯ್ಕೆಯ ನೆಚ್ಚಿನ ಬ್ಯ್ರಾಂಡ್ ಆಗಿದೆ.

ದಕ್ಷಿಣ ಭಾರತದ ಕ್ಷೀರಸಾಗರ “ನಂದಿನಿ” ಬ್ರ್ಯಾಂಡ್‍ಗೆ ರಾಯಭಾರಿಯಾಗಿದ್ದ ಶ್ರೀ ಪುನೀತ್ ರಾಜ್‍ಕುಮಾರ್ ರವರಿಗೆ ಗೌರವ ಸಲ್ಲಿಸುವ ಸಲುವಾಗಿ ಅವರ ಹುಟ್ಟು ಹಬ್ಬದ (ದಿನಾಂಕ : 17.03.2022) ರ ಪ್ರಯುಕ್ತ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ದಿನಾಂಕ: 16.03.2022 ರಂದು ರಾಷ್ಟ್ರೋತ್ಥನ ಪರಿಷತ್ ರವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು, ಈ ಶಿಬಿರದಲ್ಲಿ ಕೆಎಂಎಫ್‍ನ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲಾಗಿದೆ ಹಾಗೂ ಈ ಶಿಬಿರಕ್ಕೆ ವರನಟ ಡಾ|| ರಾಜ್‍ಕುಮಾರ್ ರವರ ಕುಟುಂಬದ ವತಿಯಿಂದ ಕುಮಾರಿ. ಧನ್ಯಾ ರಾಮ್‍ಕುಮಾರ್ ರವರು ಸಹ ಆಗಮಿಸಿ ಕೆಎಂಎಫ್ ನ ಈ ಸ್ವಯಂ ಪ್ರೇರಿತ ರಕ್ತದಾನ ಕಾರ್ಯಕ್ರಮವನ್ನು ಶ್ಲಾಘಿಸಿದರು.

ರಕ್ತದಾನ ಶಿಬಿರಕ್ಕೆ ಕೆಎಂಎಫ್‍ನ ಅಧ್ಯಕ್ಷರಾದ ಶ್ರೀ ಬಾಲಚಂದ್ರ ಜಾರಕಿಹೊಳಿಯವರು ಆಗಮಿಸಿ ಅಧಿಕಾರಿ ಹಾಗೂ ನೌಕರರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿರುವ ಕಾರ್ಯವು ಪ್ರಶಂಸನಿಯವಾಗಿದೆಯೆಂದು ಅಧಿಕಾರಿ, ಸಿಬ್ಬಂದಿಗಳನ್ನು ಅಭಿನಂದಿಸಿದರು. ಕಹಾಮದ ವ್ಯವಸ್ಥಾಪಕ ನಿರ್ದೇಶಕರಾದ ಬಿ. ಸಿ. ಸತೀಶ್ ರವರು, ಆಡಳಿತ ಮಂಡಳಿ ನಿರ್ದೇಶಕರುಗಳಾದ ಶ್ರೀ. ಕಾಪು ದಿವಾಕರ್ ಶೆಟ್ಟಿ, ಶ್ರೀ ಶ್ರೀಶೈಲ ಗೌಡ ಪಾಟೀಲ್, ಶ್ರೀ. ನಂಜುಂಡ ಸ್ವಾಮಿ ಹಾಗೂ ಕಹಾಮದ ಹಿರಿಯ ಅಧಿಕಾರಿಗಳು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ದಿನಾಂಕ: 17.03.2022 ರಂದು ಶ್ರೀ ಪುನೀತ್ ರಾಜ್‍ಕುಮಾರ್ ರವರ ಹುಟ್ಟದ ಪ್ರಯುಕ್ತ ಕಂಠೀರವ ಸ್ಟೂಡಿಯೋದ ಸಮಾಧಿ ಬಳಿ ಆಗಮಿಸುವ ಅಭಿಮಾನಿಗಳಿಗೆ ನಂದಿನಿ ಮಜ್ಜಿಗೆ ವಿತರಣೆ ವ್ಯವಸ್ಥೆ ಮಾಡಲಾಗಿದೆ.

 

 

About the author

bbmadmin

Leave a Comment

Facebook Like Box

ಮಿಸ್ ಮಾಡದೆ ಓದಿ

ವಿಡಿಯೋ

Copyright © 2020 BBMNAVEEN2012.COM All Rights Reserved. Design and Developed By Vinyas Infotech

error: Content is protected !!