ನಮ್ಮ ರಾಮನಗರ

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಸಂತಾಪ

ನಮ್ಮ ರಾಮನಗರ : ಒಬ್ಬ ಜನಾನುರಾಗಿ ಜನಪ್ರತಿನಿಧಿ ಹಾಗೂ ಉತ್ತಮ ಸಂಸದೀಯ ಪಟುವೊಬ್ಬರ ಅಕಾಲಿಕ ಅಗಲಿಕೆ ದೇಶ ಹಾಗೂ ಪಕ್ಷಕ್ಕೆ ತುಂಬಲಾರದ ಶೂನ್ಯ ಸೃಷ್ಟಿಸಿದೆ ಎಂದು ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಿ.ನರೇಂದ್ರ ಸಂತಾಪ ವ್ಯಕ್ತಪಡಿಸಿದರು.
ಬಿಜೆಪಿ ನಗರ ಮಂಡಲ ಹಾಗೂ ನಗರ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಬುಧವಾರ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿದರು.

ರಾಜ್ಯ ಮತ್ತು ಕೇಂದ್ರದ ನಡುವಿನ ಸಂಪರ್ಕಕೊಂಡಿಯಂತೆ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ಅಂಗಡಿಯವರು ಬಿಜೆಪಿ ಕಾರ್ಯಕರ್ತರ ಪಾಲಿನ ಅಪ್ತಮಿತ್ರನಂತಿದ್ದರು ಎಂದು ಸ್ಮರಿಸಿದರು.

ವಿಕ್ಟೋರಿಯಾ ಆಸ್ಪತ್ರೆಯ ಪಿ.ಆರ್ .ಓ ಚನ್ನಪಟ್ಟಣದ ಗಿರೀಶ್ ಗೆ ಕಾಯಕಲ್ಪ ಪುರಸ್ಕಾರ
ದಿ.ಅನಂತ್ ಕುಮಾರ್ ನಂತರ ದೆಹಲಿಯಲ್ಲಿ ರಾಜ್ಯದ ಜನರ ಕೆಲಸಗಳನ್ನು ಬಹಳ ಸುಲಭವಾಗಿ ಮಾಡಿಸಿಕೊಡುತ್ತಿದ್ದ ಅಂಗಡಿಯವರನ್ನು ಕೊರೋನಾ ಮಹಾಮಾರಿ ಬಲಿ ತೆಗೆದುಕೊಂಡಿರುವುದು ಪಕ್ಷದ ಕಾರ್ಯಕರ್ತರು ಹಾಗೂ ಅವರ ಪರಿವಾರಕ್ಕೆ ಸಿಡಿಲು ಬಡಿದಂತಾಗಿದ್ದು ಸಚಿವ ಅಂಗಡಿ ಕುಟುಂಬ ಹಾಗೂ ಕಾರ್ಯಕರ್ತ ಬಂಧುಗಳಿಗೆ ದು:ಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.
ರಾಮನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರುದ್ರದೇವರು ಹಾಗೂ ನಗರ ಮಂಡಲ ಅಧ್ಯಕ್ಷ ಪಿ.ಶಿವಾನಂದ್ ಮಾತನಾಡಿದರು. ಜಿಲ್ಲಾ ಮಾಧ್ಯಮ ಪ್ರಮುಖ್ ಚಂದ್ರಶೇಖರ ರೆಡ್ಡಿ, ವಕೀಲರಾದ ಕೆ.ಟಿ.ಶಾಂತಪ್ಪ, ವಿನೋದ್ ಭಗತ್, ಮಹಿಳಾ ಮೋರ್ಚಾ ಅಧ್ಯಕ್ಷೆ ಪುಷ್ಪಾಲತಾ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಬೆಕ್ಕು ಅಡ್ಡ ಬಂದಾಗ ನಿಂತು ಹೋಗೊದು ಏಕೆ ಗೊತ್ತಾ? ಮೂಡನಂಬಿಕೆ! ವೈಜ್ಞಾನಿಕ ಕಾರಣ!!
:

About the author

bbmadmin

Leave a Comment

Facebook Like Box

ಮಿಸ್ ಮಾಡದೆ ಓದಿ

ವಿಡಿಯೋ

Copyright © 2020 BBMNAVEEN2012.COM All Rights Reserved. Design and Developed By Vinyas Infotech

error: Content is protected !!